ಹೆಬ್ಬಾಲೆ, ಏ.2 : ತುಮಕೂರು ಸಿದ್ದಗಂಗಾ ಮಠದ ಹಿರಿಯ ಸ್ವಾಮೀಜಿ ಶ್ರೀ ಶಿವಕುಮಾರ ಸ್ವಾಮಿಗಳ 111ನೇ ಜನ್ಮದಿನೋತ್ಸವವನ್ನು ಹುಲುಸೆ ಗ್ರಾಮದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕೊಡಗು ಜಿಲ್ಲಾ ವಚನ ಸಾಹಿತ್ಯ ಪರಿಷತ್ತು ಹಾಗೂ ಸಿದ್ದಗಂಗಾ ಶ್ರೀ ಭಕ್ತ ಮಂಡಳಿ ಸೇವಾ ಸಮಿತಿ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಲಂಕೃತ ಎತ್ತಿನ ಗಾಡಿಯಲ್ಲಿ ಶ್ರೀಗಳ ಭಾವಚಿತ್ರವನ್ನು ಇರಿಸಿ ವಾದ್ಯಗೋಷ್ಠಿಗಳೊಂದಿಗೆ ಮೆರವಣಿಗೆ ನಡೆಸಲಾಯಿತು.

ಮೆರವಣಿಗೆಗೆ ಬಸವಪಟ್ಟಣದ ಶ್ರೀ ಸ್ವಾತಂತ್ರ ಬಸವಲಿಂಗ ಸ್ವಾಮೀಜಿ ಚಾಲನೆ ನೀಡಿದರು. ತೊರೆನೂರು ವಿರಕ್ತಮಠದ ಶ್ರೀಮಲ್ಲೇಶ ಸ್ವಾಮೀಜಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ದೇವಸ್ಥಾನದಲ್ಲಿ ಅರ್ಚಕ ರಾಘವೇಂದ್ರ ಆಚಾರ್ಯ ಅವರು ಶ್ರೀಗಳ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪುರುಷರು ಕೂಡ ಕಳಶ ಹೊತ್ತು ಗಮನ ಸೆಳೆದರು. ವಚನ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ದೇವಾಲಯ ಸಮಿತಿ ಅಧ್ಯಕ್ಷ ರಾಜು, ಮುಖಂಡರಾದ ಅಪ್ಪಣ್ಣ , ಸದಾಶಿವ, ಮಹೇಶ್, ಸಣ್ಣಪ್ಪ, ಶಿವರುದ್ರಪ್ಪ, ಮಹೇಶ್ ಇದ್ದರು. ನಂತರ ಅನ್ನಸಂತರ್ಪಣೆ ನಡೆಯಿತು.