ಹೆಬ್ಬಾಲೆ, ಏ. 6 : ನಂಜರಾಯಪಟ್ಟಣದ ದುಬಾರೆಯ ಮಖಾಂ ಉರೂಸ್ ತಾ. 9ರಂದು ನಡೆಯಲಿದೆ. ದುಬಾರೆ ದರ್ಗಾ ಶರೀಫ್‍ನಲ್ಲಿ ಅಂತಿಮ ವಿಶ್ರಾಂತಿ ಪಡೆಯುತ್ತಿರುವ ವಲಿಯುಲ್ಲಾ ಹೆಸರಿನಲ್ಲಿ ಈ ಉರೂಸ್ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಮುಸ್ಲಿಂ ಜಮಾಹತ್ ಕಮಿಟಿ ಅಧ್ಯಕ್ಷ ಎಂ.ಎಂ. ರಫೀಕ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮೌಲಿದ್ ಪಾರಾಯಣ ನಡೆಯಲಿದೆ. ನಂತರ ಅನ್ನದಾನ ಏರ್ಪಡಿಸಲಾಗಿದೆ.