ಸುಂಟಿಕೊಪ್ಪ, ಏ.6: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ಸವಾರನೊಬ್ಬ ಗಾಯಗೊಂಡು ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ರಾತ್ರಿ 7 ಗಂಟೆಗೆ ಕೆದಕಲ್ ಸಮೀಪದ 7ನೇಮೈಲು ನಿವಾಸಿ ಕೃಷ್ಣ ಎಂಬವರ ಪುತ್ರ ಕಿರಣ್ ಬೈಕ್‍ನಲ್ಲಿ (ಕೆಎ 12 ಕ್ಯೂ 8869) ಕುಶಾಲನಗರಕ್ಕೆ ಹೋಗುತ್ತಿದ್ದಾಗ ಆನೆಕಾಡು ಅಪರಿಚಿತ ವಾಹನವೊಂದು ಡಿಕ್ಕಿಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡ ಕಿರಣ್ ಅವರನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ದ್ವಿಚಕ್ರ ವಾಹನ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕುಶಾಲನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.