ಮಡಿಕೇರಿ, ಏ. 6: ಅಖಿಲ ಕೊಡವ ಸಮಾಜ ಹಾಗೂ ಮಡಿಕೇರಿ ಕೊಡವ ಸಮಾಜದ ಸಂಯುಕ್ತಾಶ್ರಯ ದಲ್ಲಿ ಕೊಡವ ಸಮಾಜದಲ್ಲಿ ಕೊಡಗಿನ ಆದಿ ಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿಯ 150ನೇ ಜನ್ಮೋತ್ಸವ ಕಾರ್ಯಕ್ರಮ ನಡೆಯಿತು.

ಕೊಡವ ಸಮಾಜದ ಅಧ್ಯಕ್ಷ ಕೊಂಗಾಂಡ ಎಸ್. ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಉದ್ಘಾಟಿಸಿದರು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಹರದಾಸ ಅಪ್ಪಚ್ಚ ಕವಿ ಅವರ ನಾಟಕದ ಆಯ್ದ ಒಂದು ಭಾಗದ ಪ್ರದರ್ಶನ ಮಾದೇಟಿರ ಪ್ರಮಿಳಾ ಜೀವನ್ ಅವರ ನಿರ್ದೇಶನದಲ್ಲಿ ಮೂಡಿ ಬಂತು. ಖ್ಯಾತ ರಂಗಕರ್ಮಿ ಅಡ್ಡಂಡ ಕಾರ್ಯಪ್ಪ ಅವರಿಂದ ‘ಕವಿ ಕಾವ್ಯ ನಿರೂಪಣೆ’ ಕಾರ್ಯಕ್ರಮ ನಡೆಯಿತು. ಅಖಿಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಮೊಣ್ಣಪ್ಪ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೊಡವ ಸಮಾಜದ ನಿರ್ದೇಶಕ ಕಾಶಿ ಅಚ್ಚಯ್ಯ ಪ್ರಾರ್ಥಿಸಿದರು. ರಾಜಾ ಮಾದಪ್ಪ ಸ್ವಾಗತಿಸಿದರು. ಜಂಟಿ ಕಾರ್ಯದರ್ಶಿ ಮಾದೇಟಿರ ಬೆಳ್ಯಪ್ಪ ಕಾರ್ಯಕ್ರಮ ನಿರೂಪಿಸಿ, ಉಪಾಧ್ಯಕ್ಷ ಮಣವಟ್ಟಿರ ಚಿಣ್ಣಪ್ಪ ವಂದಿಸಿದರು.