ಮಡಿಕೇರಿ, ಏ. 6: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಪ್ರಥಮ ವರ್ಷದ ‘ದಲಿತ ಕ್ರಿಕೆಟ್ ಕಪ್’ ಮತ್ತು ವಿವಿಧ ಕ್ರೀಡಾ ಸ್ಪರ್ಧೆಗಳಿಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಚಾಲನೆ ದೊರೆಯಿತು. ಕ್ರೀಡಾಕೂಟವನ್ನು ನಗರದ ಸರಕಾರಿ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಹೆಚ್.ಎಸ್. ದೇವದಾಸ್ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಅಂಬೇಡ್ಕರ್ ಭವನದ (ಟ್ರಸ್ಟ್) ಅಧ್ಯಕ್ಷ ಹೆಚ್.ಎಂ. ನಂದಕುಮಾರ್, ಪ್ರಬುದ್ಧ ನೌಕರರ ಒಕ್ಕೂಟದ ಅಧ್ಯಕ್ಷ ಡಾ. ಸತೀಶ್, ದಸಂಸ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ಮೈಸೂರು ಸಿಲ್ಕ್ಸ್ ಮಾಲೀಕ ಮೊಯ್ದಿನ್ ಭಾಗವಹಿಸಿದ್ದರು.ತಾ. 8ರವರೆಗೆ ಕ್ರೀಡಾಕೂಟ ನಡೆಯಲಿದೆ.