ಕುಶಾಲನಗರ, ಏ. 30: ಕುಶಾಲನಗರ ನಗರ ಘಟಕದ ಬಿಜೆಪಿ ಕಾರ್ಯಕರ್ತರು ಮಡಿಕೇರಿ ವಿಧಾನಸಭಾ ಅಭ್ಯರ್ಥಿ ಅಪ್ಪಚ್ಚುರಂಜನ್ ಪರ ಪ್ರಚಾರಕ್ಕೆ ಚಾಲನೆ &divound;ೀಡಿದರು. ಬೆಳಗ್ಗೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮತ ಪ್ರಚಾರ ಆರಂಭಿಸಿದ ಕಾರ್ಯಕರ್ತರು ಪಟ್ಟಣ ವ್ಯಾಪ್ತಿಯ ಅಂಗಡಿ ಮಳಿಗೆಗಳು, ಮನೆಗಳಿಗೆ ತೆರಳಿ ಪ್ರಚಾರ ನಡೆಸಿದರು. ಬಿಜೆಪಿ ಸರಕಾರದ ಸಾಧನೆಗಳು, ಮಡಿಕೇರಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅರಿವು ಮೂಡಿಸಲಾಯಿತು. ನಗರ ಘಟಕದ ಅಧ್ಯಕ್ಷ ಕೆ.ಜಿ.ಮನು ನೇತೃತ್ವದಲ್ಲಿ ಪಕ್ಷದ ಪ್ರಮುಖರು ಕಾರ್ಯಕರ್ತರು ಇದ್ದರು.