ಮಡಿಕೇರಿ, ಮೇ 2: ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಗ್ರಾಮದ ವಿಜು ಪೊನ್ನಪ್ಪ ಎಂಬವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರಾಜು (47) ಎಂಬ ಕಾರ್ಮಿಕ ಎದೆ ನೋವು ಕಾಣಿಸಿಕೊಂಡು ಸಾವನ್ನಪ್ಪಿರುವ ಕುರಿತು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ವಾರಿಸುದಾರರು ಯಾರಾದರೂ ಇದ್ದಲ್ಲಿ ಪೊನ್ನಂಪೇಟೆ ಠಾಣೆಯಲ್ಲಿ 08274- 249044 ಸಂಪರ್ಕಿಸುವಂತೆ ಪ್ರಕಟಣೆ ಕೋರಿದೆ.