ಮಡಿಕೇರಿ, ಮೇ 3: ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವಕ್ತಾರರಾಗಿ ವೀರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ರಾಜೇಶ್ ಪದ್ಮನಾಭ, ಮಡಿಕೇರಿ ವಿಧಾನಸಭಾ ಕ್ಷೇತ್ರದ ವಕ್ತಾರರಾಗಿ ಕುಶಾಲನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ್ ಗುಂಡೂರಾವ್ ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವಕ್ತಾರರಾಗಿ ಗೋಣಿಕೊಪ್ಪದ ನಾರಾಯಣ ಸ್ವಾಮಿ ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ಎ.ಎಸ್. ಟಾಟು ಮೊಣ್ಣಪ್ಪ ತಿಳಿಸಿದ್ದಾರೆ.