ವಿಜಯಪುರ, ಮೇ 6: ಜಿಲ್ಲೆಯ ಸಿಂಧಗಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರನ್ನು ಪೆÇಲೀಸರು ಬಂಧಿಸಿದ್ದಾರೆ. ಮಾದರಿ ಮತಪತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಕ್ರಮಸಂಖ್ಯೆ ಅದಲು ಬದಲು ಮಾಡಲಾಗಿತ್ತು. ಬಿಜೆಪಿ ತಯಾರಿಸಿದ ಮಾದರಿ ಮತಪತ್ರದಲ್ಲಿ ಉದ್ದೇಶಪೂರ್ವಕವಾಗಿ ಕ್ರಮಸಂಖ್ಯೆ ಅದಲು ಬದಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಅಭ್ಯರ್ಥಿ ಎಂ.ಸಿ. ಮನಗೂಳಿ ಚುನಾವಣಾ ಅಧಿಕಾರಿಗಳಿಗೆ ಶನಿವಾರ ರಾತ್ರಿ ದೂರು ನೀಡಿದ್ದರು. ದೂರಿನ ಅನ್ವಯ ಸಿಂದಗಿ ಠಾಣೆ ಪೆÇಲೀಸರು ಇಂದು ಅಭ್ಯರ್ಥಿ ರಮೇಶ ಭೂಸನೂರ ಅವರನ್ನು ಬಂಧಿಸಿದ್ದಾರೆ.