ಶನಿವಾರಸಂತೆ: ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡಿದ ದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷದ ಬಗ್ಗೆ ಜನತೆ ಎಂದಿನಂತೆ ಒಲವು ವ್ಯಕ್ತಪಡಿಸುತ್ತಿದ್ದಾರೆ ಎಂದು ಮುಖಂಡ ಟಿ.ಪಿ. ರಮೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಪ್ರಚಾರ ಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಕೆ.ಪಿ. ಚಂದ್ರಕಲಾ ಪರ ಮತ ಯಾಚಿಸಿ ಅವರು ಮಾತನಾಡಿದರು.

ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿಸುವ ಸಾಮಥ್ರ್ಯ ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ ಎಂದು ಟಿ.ಪಿ. ರಮೇಶ್ ವಿಶ್ವಾಸ ವ್ಯಕ್ತಪಡಿಸಿದರು.

ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಮಾತನಾಡಿ ಬಿಜೆಪಿ ಶಾಸಕರಿಂದ ಜಿಲ್ಲೆ ಅಭಿವೃದ್ಧಿ ಕಂಡಿಲ್ಲ ಎಂದು ದೂರಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಈ ಬಾರಿಯ ಚುನಾವಣೆ ರಾಜ್ಯದ ಭವಿಷ್ಯ ನಿರ್ಧರಿಸುವ ಚುನಾವಣೆಯಾಗಿದೆ ಎಂದರು.

ಮುಖಂಡರಾದ ಚಂದ್ರಮೌಳಿ, ಬಿ.ಎಸ್. ಅನಂತಕುಮಾರ್, ಬಿ.ಕೆ. ಚಿನ್ನಪ್ಪ, ಲೋಕೇಶ್ ಕುಮಾರ್ ಮಾತನಾಡಿದರು. ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸಿ.ಬಿ. ಅಬ್ಬಾಸ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ. ರಂಗಸ್ವಾಮಿ, ಮುಖಂಡರಾದ ಎಸ್.ಕೆ. ವೀರಪ್ಪ, ಡಾ. ಉದಯಕುಮಾರ್, ಯಾಕೂಬ್ ಮತ್ತಿತರರು ಇದ್ದರು