ಸೋಮವಾರಪೇಟೆ, ಮೇ 6: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸೋಮವಾರಪೇಟೆ ಪಟ್ಟಣದಲ್ಲಿ ಪೊಲೀಸ್ ಇಲಾಖೆ ಹಾಗೂ ಆಟೋ ಚಾಲಕರ ಸಂಘದ ಆಶ್ರಯದಲ್ಲಿ ಜಾಗೃತಿ ಜಾಥಾ ನಡೆಯಿತು.

ಮದ್ಯಪಾನ ಮಾಡಿ ವಾಹನ ಚಾಲಿಸಬೇಡಿ, ಸೀಟ್ ಬೆಲ್ಟ್ ಕಡ್ಡಾಯವಾಗಿ ಧರಿಸಿ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ಎಂಬಿತ್ಯಾದಿ ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಪೊಲೀಸ್ ಠಾಣಾಧಿಕಾರಿ ಎಂ. ಶಿವಣ್ಣ ಸೇರಿದಂತೆ ಸಿಬ್ಬಂದಿಗಳು, ಆಟೋ ಚಾಲಕರ ಸಂಘದ ಅಧ್ಯಕ್ಷ ಮೋಹನ್ ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು.