ಸೋಮವಾರಪೇಟೆ, ಮೇ 8: ಭಾರತ್ ಸ್ವಾಭಿಮಾನ್ ಟ್ರಸ್ಟ್ ಮತ್ತು ಪತಂಜಲಿ ಯೋಗ ಸಮಿತಿ ವತಿಯಿಂದ ತಾ. 27 ರಂದು ಪೂರ್ವಾಹ್ನ 10 ರಿಂದ ಸಂಜೆ 5 ಗಂಟೆಯವರೆಗೆ ಮುಳ್ಳೂರು ಗ್ರಾಮದಲ್ಲಿ ಸತ್ಸಂಗ ಕಾರ್ಯಕ್ರಮ ಆಯೋಜಿಸ ಲಾಗಿದೆ ಎಂದು ಪತಂಜಲಿ ಯೋಗ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಪ್ಪ ಮಾಸ್ಟರ್ ತಿಳಿಸಿದ್ದಾರೆ. ಮುಳ್ಳೂರು ಗ್ರಾಮದ ಚಂದ್ರಪ್ಪ ಮಾಸ್ಟರ್ ನಿವಾಸದಲ್ಲಿ ಆಯೋಜಿಸ ಲಾಗಿರುವ ಸತ್ಸಂಗವನ್ನು ಗ್ರಾಮದ ಹಿರಿಯರಾದ ಎಂ.ಎಸ್. ಚಂದ್ರಪ್ಪ ಉದ್ಘಾಟಿಸಲಿದ್ದು, ಸಾಹಿತ್ಯ ರತ್ನ ಡಿ. ವಿಷ್ಣು ಭಟ್ ಉಪನ್ಯಾಸ ನೀಡಲಿದ್ದಾರೆ. ಮಡಿಕೇರಿಯ ರಾಮಾಂಜನೇಯ ಭಜನಾ ಮಂಡಳಿ ಮತ್ತು ಕುಶಾಲನಗರದ ಪಾಂಚಜನ್ಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ಸತ್ಸಂಗದಲ್ಲಿ ಅರಮೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿ ಕಾರ್ಜುನ ಸ್ವಾಮೀಜಿ, ಕಲ್ಲಹಳ್ಳಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಮನೆಹಳ್ಳಿ ಮಠದ ಶ್ರೀಮಹಾಂತ ಶಿವಲಿಂಗ ಸ್ವಾಮೀಜಿ, ತೆಂಕಲಗೋಡು ಮಠದ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದು ಚಂದ್ರಪ್ಪ ತಿಳಿಸಿದ್ದಾರೆ.