ಸೋಮವಾರಪೇಟೆ, ಮೇ 17: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ಬಿ- ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಯಾಗಿರುವ ಎಂ.ಎ. ರುಬೀನಾ ಅವರನ್ನು ಯೋಜನೆಯ ಪರವಾಗಿ ಅಭಿನಂದಿಸಲಾಯಿತು.

ಯೋಜನೆಯ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ವೈ. ಪ್ರಕಾಶ್, ಮೇಲ್ವಿಚಾರಕ ರಮೇಶ್ ಅವರುಗಳು ರುಬೀನಾ ಅವರಿಗೆ ಅಭಿನಂದನಾ ಪತ್ರ ವಿತರಿಸಿದರು.