ಮಡಿಕೇರಿ, ಮೇ 18: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ತಾ. 27 ರಂದು ಕಾವೇರಿ ಕಾಲೇಜು ಗೋಣಿಕೊಪ್ಪಲಿನಲ್ಲಿ ಮಾಜಿ ಸೈನಿಕರ ಸಮಾವೇಶವನ್ನು ಆಯೋಜಿಸಲಾಗಿದೆ. ಸಮಾವೇಶದಲ್ಲಿ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು, ಅಭಿಲೇಖಾ ಕಾರ್ಯಾಲಯ ಮತ್ತು ಪಿಂಚಣಿಗೆ ಸಂಬಂಧಿಸಿದ ತಮ್ಮ ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಲು ಮತ್ತು ಕಲ್ಯಾಣ ಹಾಗೂ ಪುನರ್ವಸತಿಗೆ ಸಂಬಂಧಿಸಿದಂತೆ ವಿಸ್ತರಿಸಲಾಗುವ ಎಲ್ಲಾ ಸೌಲಭ್ಯಗಳ ಮಾಹಿತಿಗಾಗಿ ಸಮಾವೇಶದಲ್ಲಿ ಮುಕ್ತವಾಗಿ ಪಾಲ್ಗೊಂಡು ಇದರ ಸದುಪಯೋಗವನ್ನು ಪಡೆಯಬೇಕು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.