ಮಡಿಕೇರಿ, ಮೇ 28: ಭ್ರಷ್ಟಾಚಾರ ನಿಗ್ರಹದಳ ಮಡಿಕೇರಿ ಪೊಲೀಸ್ ಠಾಣಾ ವತಿಯಿಂದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಲು ತಾ. 30 ರಂದು ಬೆಳಿಗ್ಗೆ 11 ಗಂಟೆಯಿಂದ 2 ಗಂಟೆಯವರೆಗೆ ವೀರಾಜಪೇಟೆಯ ಪ್ರವಾಸಿ ಮಂದಿರದಲ್ಲಿ, ತಾ. 31 ರಂದು ಬೆಳಿಗ್ಗೆ 11 ಗಂಟೆಯಿಂದ 2 ಗಂಟೆಯವರೆಗೆ ನಗರದ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕಾರ ಸಭೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ ದೂರವಾಣಿ ಸಂಖ್ಯೆ 08272-222100, 9480806282 ನ್ನು ಸಂಪರ್ಕಿಸಬಹುದಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.