ಕೂಡಿಗೆ, ಜೂ. 11: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ಕೆರೆಕೊಪ್ಪಲು ಚೌಡಮ್ಮ ತಾಯಿಯ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.

ಬೆಳಗ್ಗಿನಿಂದಲೇ ಚೌಡಮ್ಮ ತಾಯಿಗೆ ವಿಶೇಷ ಪೂಜೆಗಳು ನಡೆದವು. ಪೂಜಾ ಕಾರ್ಯಕ್ರಮದಲ್ಲಿ ದೊಡ್ಡತ್ತೂರು, ಚಿಕ್ಕತ್ತೂರು, ಕೂಡುಮಂಗಳೂರು, ಕೂಡಿಗೆ ವ್ಯಾಪ್ತಿಯ ಭಕ್ತಾಧಿಗಳು ಪಾಲ್ಗೊಂಡಿದ್ದರು. ಪೂಜಾ ಕಾರ್ಯಕ್ರಮಗಳು ಅರ್ಚಕ ಹನುಮಯ್ಯ, ಈರಯ್ಯ ನೇತೃತ್ವದಲ್ಲಿ ನಡೆದವು. ಮಹಾಮಂಗಳಾರತಿ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಸಲಾಯಿತು.

ಈ ಸಂದರ್ಭ ಸಹಕಾರ ಸಂಘದ ನಿರ್ದೇಶಕ ಕೆ.ಕೆ. ಭೋಗಪ್ಪ, ತಾ.ಪಂ. ಸದಸ್ಯ ಗಣೇಶ್, ಕೂಡುಮಂಗಳೂರು ಗ್ರಾ.ಪಂ. ಸದಸ್ಯ ಮಂಜುನಾಥ್, ಗ್ರಾಮದ ಪ್ರಮುಖರಾದ ರಾಮಣ್ಣ, ಗಿರೀಶ್, ಚಂದ್ರಶೇಖರ್, ಮಂಜು ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.