ಸೋಮವಾರಪೇಟೆ, ಜೂ. 11: ಸಮೀಪದ ಸಿದ್ಧಲಿಂಗಪುರ-ಹರಿಶಿಣಕುಪ್ಪೆ ಗ್ರಾಮದ ಶ್ರೀ ಮಂಜುನಾಥ ಹಾಗೂ ನವ ನಾಗನಾಥಸ್ವಾಮಿ ದೇವಾಲಯದಲ್ಲಿ ಪಂಚಮಿ ಪೂಜೆಯ ಅಂಗವಾಗಿ ಗ್ರಾಮದ ಸುತ್ತಮುತ್ತಲಿನ ವಿದ್ಯಾರ್ಥಿ ಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಪುಸ್ತಕಗಳನ್ನು ವಿತರಿಸಿದ ಮಂಜುನಾಥ ಸ್ವಾಮಿ ದೇವಾಲಯದ ಗುರುಗಳಾದ ರಾಜೇಶ್ ನಾಥ್ ಮಾತನಾಡಿ, ದೇವಾಲಯಗಳು ಪೂಜಾ ಕೈಂಕರ್ಯಗಳನ್ನು ನಡೆಸುವದರ ಜತೆಗೆ ಪುಸ್ತಕ ವಿತರಣೆ, ಬಡವರ ಆರೋಗ್ಯದ ಕುರಿತು ಕಾಳಜಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಮಾತ್ರ ಸಾರ್ಥಕ ಸಮಾಜ ನಿರ್ಮಾಣ ಸಾಧ್ಯ ಎಂದರು. ಈ ಸಂದರ್ಭ ಒಂದನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ನೀಡಿದ ರುದ್ರಭೈರವಿ ಚಾರಿಟೇಬಲ್ ಟ್ರಸ್ಟ್‍ನ ಪ್ರದೀಪ್, ಜಾನಪದ ಪರಿಷತ್‍ನ ಸೋಮವಾರಪೇಟೆ ಹೋಬಳಿ ಘಟಕದ ಅಧ್ಯಕ್ಷ ಎಸ್.ಎ. ಮುರಳೀಧರ್ ಮತ್ತಿತರರು ಉಪಸ್ಥಿತರಿದ್ದರು.