ಕುಶಾಲನಗರ, ಜೂ. 12: ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಪ್ರಮುಖರ ಸಭೆ ಕುಶಾಲನಗರದಲ್ಲಿ ನಡೆಯಿತು. ಸ್ಥಳೀಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಆರ್. ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವ್ಯಾಪಾರಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.

ಜಿಲ್ಲೆಯಾದ್ಯಂತ ಸಂಘಟನೆಯನ್ನು ಬಲಪಡಿಸಿ ಸದ್ಯದಲ್ಲಿಯೇ ಜಿಲ್ಲಾಮಟ್ಟದ ಸಮಾವೇಶವೊಂದನ್ನು ಆಯೋಜನೆ ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಈ ಸಂದರ್ಭ ಒಕ್ಕೂಟದ ಜಿಲ್ಲಾ ಮಾಧ್ಯಮ ಸಲಹೆಗಾರ ಕೆ.ಟಿ. ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕೆ. ರವಿ, ಉಪಾಧ್ಯಕ್ಷ ಕೆ.ಕೆ. ದಿನೇಶ್, ಕಾರ್ಯದರ್ಶಿ ಆರ್.ವಿ. ಸತೀಶ್ ಮತ್ತಿತರರು ಇದ್ದರು.