ನಾಪೆÇೀಕ್ಲು, ಜೂ. 12: ಬೆಳೆಗಾರರೊಬ್ಬರು ಮುಖಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಪೇರೂರು ಗ್ರಾಮದಲ್ಲಿ ನಡೆದಿದೆ.

ಪೇರೂರು ಗ್ರಾಮದ ಕಾಫಿ ಬೆಳೆಗಾರ ಮಚ್ಚೂರ ಪವನ್ ಮಂದಣ್ಣ (67) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಇಂದು ಸಂಜೆ ತಮ್ಮ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದರಾದರೂ, ಅವರನ್ನು ಮನೆಯವರು ಮತ್ತು ಕುಟುಂಬಸ್ಥರು ಮಡಿಕೇರಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ನಾಪೆÇೀಕ್ಲು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತರು ತನ್ನ ಮೃತದೇಹವನ್ನು ಮಡಿಕೇರಿ ಮೆಡಿಕಲ್ ಕಾಲೇಜಿಗೆ ದಾನ ನೀಡಲು ಪತ್ರ ಬರೆದಿಟ್ಟಿರುವದಾಗಿ ಪುತ್ರ ತಿಳಿಸಿದ್ದಾರೆ.