ಸೋಮವಾರಪೇಟೆ, ಜೂ. 12: ಮಳೆ-ಗಾಳಿಗೆ ವಿದ್ಯುತ್ ಅವಘಡ ಸಂಭವಿಸಿ 2 ಜಾನುವಾರುಗಳು ಸಾವನ್ನಪ್ಪಿದ ಘಟನೆ ಸಮೀಪದ ಯಡೂರು ಮತ್ತು ದುದ್ದುಗಲ್ಲು ಗ್ರಾಮದಲ್ಲಿ ಸಂಭವಿಸಿದೆ. ಯಡೂರು ಗ್ರಾಮದ ಲೋಕೇಶ್ ಎಂಬವರಿಗೆ ಸೇರಿದ ಎತ್ತುಗಳು ಗದ್ದೆಯಲ್ಲಿ ಮೇಯುತ್ತಿದ್ದ ಸಂದರ್ಭ ಮಳೆ-ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ತುಂಡಾಗಿ ಎತ್ತಿನ ಮೇಲೆ ಬಿದ್ದ ಪರಿಣಾಮ ಎತ್ತು ಸ್ಥಳದಲ್ಲೇ ಸಾವಿಗೀಡಾಗಿದೆ. ಜಾನುವಾರಿನ ಮಾಲೀಕರಿಗೆ ಸುಮಾರು ರೂ. 40 ಸಾವಿರ ನಷ್ಟವಾಗಿದೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು ಚೆಸ್ಕಾಂ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದರೊಂದಿಗೆ ಹಾನಗಲ್ಲು ಗ್ರಾಮದ ದುದ್ದುಗಲ್ಲು ರಸ್ತೆಯ ಬದಿ ಮೇಯುತ್ತಿದ್ದ ಹಸುವಿನ ಮೇಲೆ ವಿದ್ಯುತ್ ಕಂಬ ಬಿದ್ದು, ಹಸು ಸ್ಥಳದಲ್ಲೇ ಸಾವಿಗೀಡಾಗಿದೆ. ಹಾನಗಲ್ಲು ಗ್ರಾಮದ ಪ್ರವೀಣ್ ಎಂಬವರಿಗೆ ಸೇರಿದ ಹಸುವನ್ನು ಮೇಯಲು ಬಿಡಲಾಗಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪಶುವೈದ್ಯ ಹಾಗೂ ವಿದ್ಯುತ್ ಇಲಾಖಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.