ಕುಶಾಲನಗರ, ಜೂ 12: ಮಾಜಿ ಸಚಿವ ದಿನೇಶ್ ಗುಂಡುರಾವ್ ಅವರಿಗೆ ರಾಜ್ಯ ಮಂತ್ರಿ ಮಂಡಲದಲ್ಲಿ ಸೂಕ್ತ ಸ್ಥಾನಮಾನ ಕೊಡಬೇಕೆಂದು ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮುಖ್ಯ ಮಂತ್ರಿಗಳಿಗೆ ವಿನಂತಿ ಮಾಡಿದ್ದಾರೆ. ಕುಶಾಲನಗರದ ನಿವಾಸಿಯಾಗಿದ್ದ ಜನಪ್ರಿಯ ಮುಖ್ಯಮಂತ್ರಿ ಆರ್. ಗುಂಡೂರಾಯರ ಪುತ್ರ ದಿನೇಶ್ ಗುಂಡುರಾವ್ ಸತತವಾಗಿ 5ನೇ ಬಾರಿ ಪ್ರತಿನಿಧಿಯಾಗಿ ಗೆದ್ದು ಜನಾನುರಾಗಿಯಾಗಿದ್ದು ಅವರಿಗೆ ಸಂಘ ಅಭಿನಂದನೆ ಸಲ್ಲಿಸುತ್ತಿದೆ. ಅವರನ್ನು ಸಂಪುಟದಲ್ಲಿ ಪ್ರಮುಖ ಖಾತೆ ನೀಡಿ ಸಚಿವರನ್ನಾಗಿ ಮಾಡಬೇಕೆಂದು ಸಂಘದ ಅಧ್ಯಕ್ಷ ಪಿ.ಎನ್.ವಿಜಯೇಂದ್ರ ಮತ್ತು ಪದಾಧಿಕಾರಿಗಳು ಕೋರಿದ್ದಾರೆ.