ಮಡಿಕೇರಿ, ಜೂ. 13: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2017ರ ರಿಂದ ಡಿಸೆಂಬರ್ 2017ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ, ಕಲಾವಿದರು, ಲೇಖಕರು, ಪ್ರಕಾಶಕರಿಗೆ ‘ಕನ್ನಡ ಪುಸ್ತಕ ಸೊಗಸು-2017’ (ಪ್ರಥಮ, ದ್ವಿತೀಯ, ತೃತೀಯ, ಮಕ್ಕಳ ಪುಸ್ತಕ, ಮುಖಪುಟ ಚಿತ್ರ ವಿನ್ಯಾಸದ ಪ್ರಥಮ, ಮುಖಪುಟ ಚಿತ್ರಕಲೆಯ ದ್ವಿತೀಯ) ಬಹುಮಾನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕಲಾವಿದರು, ಲೇಖಕರು, ಪ್ರಕಾಶಕರು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಳಾಸ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ತಾ. 30 ರೊಳಗೆ ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002. ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಕಲಾವಿದರು, ಲೇಖಕರು, ಪ್ರಕಾಶಕರುಗಳು ನೀಡಿದ ಪಸ್ತಕಗಳನ್ನು ಯಾವದೇ ಕಾರಣಕ್ಕೂ ಹಿಂದಿರುಗಿಸಲಾಗುವದಿಲ್ಲ.

ಹೆಚ್ಚಿನ ಮಾಹಿತಿಗಾಗಿ: ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002- ವೆಬ್ ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom, ದೂರವಾಣಿ ಸಂಖ್ಯೆ: 080-22484516/ 22107704 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.