ಕುಶಾಲನಗರ, ಜೂ. 13: ಕಾವೇರಿ ನದಿ ಪಾತ್ರದಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ಮೂಲಕ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಕುಶಾಲನಗರ ಕಾವೇರಿ ಸೇತುವೆ ಬಳಿ ನದಿಯಲ್ಲಿ ಸುಮಾರು 20 ಅಡಿಗಳಷ್ಟು ಪ್ರಮಾಣದ ನೀರು ಹರಿಯುತ್ತಿದ್ದು, ಗರಿಷ್ಠ ಮಟ್ಟ ತಲುಪಿದೆ. ನದಿಯ ಎರಡೂ ಬದಿಯ ಹೊಲಗದ್ದೆಗಳಿಗೆ ನೀರು ನುಗ್ಗಿದ್ದು ಕೃಷಿ ಚಟುವಟಿಕೆಗಳಿಗೆ ಅನಾನುಕೂಲ ಉಂಟಾಗುತ್ತಿದೆ.

ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಅಲ್ಪಸ್ವಲ್ಪ ಮಳೆ ಸುರಿದಿದೆ.