ಮಡಿಕೇರಿ, ಜೂ. 13: ಕೊಯನಾಡು ಬಳಿ ಇಂದು ಬೆಳಗಿನ ಜಾವದಲ್ಲಿ ಎರಡು ಕಂಟೇನರ್‍ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಮಿನಿ ವಾಹನ (407) ಚಾಲಕನ ಕಾಲಿಗೆ ಪೆಟ್ಟಾಗಿದ್ದು, ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣಾಧಿಕಾರಿ ಚೇತನ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸುವದರೊಂದಿಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳು ಹಾಗೂ ಆರೋಪಿ ಚಾಲಕನ ಕುರಿತು ನಿಖರ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.