ಗೋಣಿಕೊಪ್ಪಲು, ಜೂ. 26: ಕರ್ನಾಟಕ ಬೀದಿ ನಾಟಕ ಅಕಾಡೆಮಿ (ರಿ), ರಂಗಭೂಮಿ ಪ್ರತಿಷ್ಠಾನ (ರಿ) ಕೊಡಗು ಮತ್ತು ಕಾವೇರಿ ಕಾಲೇಜು ಕನ್ನಡ ವಿಭಾಗ ಸಾಹಿತ್ಯ ಸ್ಪಂದನ ಗೋಣಿಕೊಪ್ಪಲು ಇವರ ಸಂಯುಕ್ತ ಆಶ್ರಯದಲ್ಲಿ ತಾ. 27 ರಂದು (ಇಂದು) ‘ಸಿಜಿಕೆ ರಂಗಪುರಸ್ಕಾರ’ ಕಾರ್ಯಕ್ರಮ ಕಾವೇರಿ ಕಾಲೇಜು ಸೆಮಿನಾರ್ ಸಭಾಂಗಣದಲ್ಲಿ ನಡೆಯಲಿದೆ.

ಕೊಡಗಿನ ಹಿರಿಯ ರಂಗಕರ್ಮಿ ಕೋಳೇರ ಸನ್ನು ಕಾವೇರಪ್ಪ ಈ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ನಡೆಯುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಅಡ್ಡಂಡ ಕಾರ್ಯಪ್ಪ, ಕಾವೇರಿ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥೆ ಡಾ. ರೇಖಾ ವಸಂತ್ ಉಪಸ್ಥಿತರಿರುತ್ತಾರೆ ಎಂದು ಕಾರ್ಯಕ್ರಮದ ಸಂಚಾಲಕಿ ಅಡ್ಡಂಡ ಅನಿತಾ ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.