ಮಡಿಕೇರಿ, ಜೂ. 26: ಕೃಷಿ ಇಲಾಖೆ, ಇವರ ವತಿಯಿಂದ ತಾ. 27 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿ ಹೋಬಳಿಯ ಮರಗೋಡು ಪ್ರಾಥಮಿಕ ಶಾಲಾ ಮೈದಾನದಲ್ಲಿ “ಕೃಷಿ ಅಭಿಯಾನ” ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕೃಷಿ &amdiv; ಕೃಷಿ ಸಂಬಂಧಿತ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ, ರೈತರು-ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು ಅವರು ತಿಳಿಸಿದ್ದಾರೆ.