ಮಡಿಕೇರಿ, ಜೂ. 26: ಕುಶಾಲನಗರ 220 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ತಾ. 27 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ 220 ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, 66/11ಕೆವಿ ಆಲೂರು ಸಿದ್ದಾಪುರ 66/11ಕೆವಿ ಸುಂಟಿಕೊಪ್ಪ ಹಾಗೂ 66/11 ಕೆವಿ ಮಡಿಕೇರಿ, ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಆಲೂರು ಸಿದ್ದಾಪುರ, ಗೋಣಿಮರೂರು, ಮಾಲಂಬಿ, ಹೊಸಗುತ್ತಿ, ಗಣಗೂರು ಮಡಿಕೇರಿ, ಮೇಕೇರಿ, ಕಡಗದಾಳು, ಭಾಗಮಂಡಲ, ಹಾಗೂ ಸುತ್ತಮುತ್ತಲವ್ಯಾಪ್ತಿಯ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ ಅವರು ತಿಳಿಸಿದ್ದಾರೆ.