ಕೂಡಿಗೆ, ಜೂ. 26: ಕೊಡಗು ಜಿಲ್ಲೆಯ ಕೂಡಿಗೆಯಲ್ಲಿನ ಸೈನಿಕ ಶಾಲೆಯ ವಿದ್ಯಾರ್ಥಿಯೋರ್ವನ ನಿಗೂಢ ಸಾವಿಗೆ ಸಂಬಂಧಿಸಿದಂತೆ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಅವರ ಆದೇಶದಂತೆ ಈ ಪ್ರಕರಣದ ತನಿಖಾಧಿಕಾರಿ ಕುಶಾಲನಗರ ವೃತ್ತನಿರೀಕ್ಷಕ ಕ್ಯಾತೇಗೌಡ ಅವರ ತಂಡ ಚುರುಕಿನಿಂದ ತನಿಖೆ ನಡೆಸುತ್ತಿದೆ.

ಮರಣೋತ್ತರ ಪರೀಕ್ಷೆಯ ನಂತರ ಎಸ್ಪಿ ಒಳಗೊಂಡಂತೆ ತಂಡ ರಚನೆ ಮಾಡಿ ಉನ್ನತ ಮಟ್ಟದ ತನಿಖೆ ಮಾಡಲು ಸೂಚಿಸಲಾಗಿದೆ. ಅಲ್ಲದೆ, ಈ ವಿಷಯಕ್ಕೆ ಸಂಬಂಧಪಟ್ಟಂತೆ ಸಮಗ್ರ ತನಿಖೆ ನಡೆಸಬೇಕು ಎಂದು ಶಾಸಕ ರಂಜನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೆಬ್ಬಾಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಈ ಪ್ರಕರಣದ ಬಗ್ಗೆ ಮಾತನಾಡಿದರು.