ಮಡಿಕೇರಿ, ಜೂ. 26: ಕುಶಾಲನಗರದಿಂದ ಮಡಿಕೇರಿಯತ್ತ ಬರುತ್ತಿದ್ದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ ಮಗುಚಿದ ಘಟನೆ ಇಂದು ಬೆಳಿಗ್ಗೆ 10.30ಕ್ಕೆ ಸಿಂಕೋನ ತಿರುವಿನಲ್ಲಿ ನಡೆದಿದೆ. ಹಿಂಬದಿಯಿಂದ ಬರುತ್ತಿದ್ದ ಬಸ್ಸಿಗೆ ದಾರಿ ನೀಡಲು ಯತ್ನಿಸಿದ ಲಾರಿ ಚಾಲಕ ನಿಯಂತ್ರಣ ತಪ್ಪಿ ರಸ್ತೆಯ ಬಲಬದಿಗೆ ಮಗುಚಿ ಬಿದ್ದಿದೆ.

ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಡಿಕೇರಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಲಾರಿಯ ಕ್ಲೀನರ್ ಸುರಕ್ಷಿತವಾಗಿದ್ದು, ಲಾರಿಯಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಹೆಚ್ಚಿದ್ದ ಕಾರಣ ನಿಯಂತ್ರಣ ತಪ್ಪಿದೆ ಎಂದು ಪೊಲೀಸ್ ಅಧಿಕಾರಿ ಸ್ಟೀಫನ್ ತಿಳಿಸಿದ್ದಾರೆ.