ಮಡಿಕೇರಿ, ಜೂ. 26: ಕೊಡಗು ಜಿಲ್ಲಾ ಯುವ ಭವನಕ್ಕೆ ಸಂಬಂಧಪಟ್ಟಂತೆ ಚರ್ಚಿಸಲು ಯುವ ಒಕ್ಕೂಟದ ಪದಾಧಿಕಾರಿಗಳು ಇಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನು ಭೇಟಿ ಮಾಡಿದ್ದರು. ಈ ಸಂದರ್ಭ ಪ್ರತಿಕ್ರಿಯಿಸಿದ ಅಧ್ಯಕ್ಷ ಬಿ.ಎ. ಹರೀಶ್ ಅವರು ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಚರ್ಚಿಸಿ ತಾತ್ಕಾಲಿಕ ಕಚೇರಿಯ ವ್ಯವಸ್ಥೆ ಮಾಡಿಕೊಡುವದಾಗಿ ಭರವಸೆ ನೀಡಿದರು.

ಜಿ.ಪಂ. ಸದಸ್ಯ ಶಶಿ ಸುಬ್ರಮಣಿ, ಮಾಜಿ ಸದಸ್ಯ ಮನು ಮುತ್ತಪ್ಪ , ಯುವ ಒಕ್ಕೂಟದ ಪರವಾಗಿ ಸಹಕರಿಸಿದರು. ಈ ಸಂದರ್ಭ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ಪಿ.ಪಿ. ಸುಕುಮಾರ್, ನವೀನ್ ದೇರಳ, ಭೀಮಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಜಯಲಕ್ಷ್ಮಿ ಬಾಯಿ ಇದ್ದರು.