ಗೋಣಿಕೊಪ್ಪ ವರದಿ, ಜೂ. 28: ಮಳೆಯಿಂದಾಗಿ ಕುಸಿದು ಬಿದ್ದಿರುವ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯ ಮೆಟ್ಟಿಲುಗಳ ದುರಸ್ತಿ ಕಾರ್ಯ ನಡೆಯುತ್ತಿದೆ.

ಇತ್ತೀಚೆಗೆ ಸುರಿದ ಮಳೆಯಿಂದಾಗಿ ಕಾವೇರಿ ಕಾಲೇಜು ಆವರಣದಲ್ಲಿ ಸ್ಥಾಪಿಸಿರುವ ಪ್ರತಿಮೆಯ ಮೆಟ್ಟಿಲುಗಳು ಕುಸಿದಿತ್ತು. ಇದರಿಂದಾಗಿ ಜನರಿಗೆ ಪ್ರತಿಮೆಯತ್ತ ತೆರಳಲು ಆಗುತ್ತಿರಲಿಲ್ಲ. ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ದುರಸ್ತಿ ಕಾರ್ಯ ನಡೆಸುವ ಮೂಲಕ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂನವರು ಸ್ಪಂದಿಸಿದ್ದಾರೆ. ಇದು ಅಭಿಮಾನಿಗಳಲ್ಲಿ ಉತ್ಸಾಹ ಮೂಡಿಸಿದೆ.