ಮಡಿಕೇರಿ, ಜೂ. 27: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ಯಲ್ಲಿ ಜೆಡಿಎಸ್ ಪಕ್ಷದ ಪÀರಾಭವಕ್ಕೆ ಕಾರಣಗಳನ್ನು ಕಂಡು ಹಿಡಿಯುವ ಸಲುವಾಗಿ ತಾ. 30 ರಂದು ಮಡಿಕೇರಿ ನಗರಸಭಾ ವ್ಯಾಪ್ತಿಯ ಎಲ್ಲಾ 23 ವಾರ್ಡ್‍ಗಳ ಮಟ್ಟದ ಜೆಡಿಎಸ್ ಕಾರ್ಯಕರ್ತರ ನ್ನೊಳಗೊಂಡ ಆತ್ಮಾವಲೋಕನ ಸಭೆ ಕರೆಯಲಾಗಿದೆ. ಅಂದು ಸಂಜೆ 4-30ಕ್ಕೆ ಮಡಿಕೇರಿಯ ಕೂರ್ಗ್ ಕಮ್ಯೂನಿಟಿ ಹಾಲ್‍ನಲ್ಲಿ ಸಭೆ ನಡೆಯಲಿದ್ದು, ಮಹಿಳೆಯರನ್ನೊಳ ಗೊಂಡಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡು ಮುಂದೆ ಪಕ್ಷದ ಗೆಲುವಿಗೆ ಸಹಕಾರಿ ಆಗುವಂತಹ ಸಲಹೆ-ಸೂಚನೆಗಳನ್ನು ನೀಡುವಂತೆ ಜೆಡಿಎಸ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ. ಎಂ. ಧರ್ಮಪ್ಪ ಕೋರಿದ್ದಾರೆ.