ಮಡಿಕೇರಿ, ಜೂ. 28: ಮೋದಿ ಸರ್ಕಾರ ಕರ್ನಾಟಕಕ್ಕೆ ಯಾವೆಲ್ಲಾ ಯೋಜನೆಗಳನ್ನು ನೀಡಿದೆ ಎಂಬವದರ ಬಗ್ಗೆ ಯಾರಿಂದಲೂ ಪ್ರೂವ್ ಮಾಡೋದು ಬೇಕಾಗಿಲ್ಲ ಎಂದು ಪ್ರತಾಪ್ ಹೇಳಿದ್ದಾರೆ.

ನಿನ್ನೆ ದಿನ ಬೆಂಗಳೂರು ನಗರದ ಅರಮನೆ ಆವರಣದಲ್ಲಿ ನಡೆದ ಕೆಂಪೇಗೌಡ ಜಯಂತಿ ಸಂದರ್ಭದಲ್ಲಿ ನಂಜಾವಾದೂತ ಶ್ರೀಗಳು ಮೋದಿ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದು ಹೇಳಿದ್ದ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷ ಟಾಂಗ್ ನೀಡಿದ್ದಾರೆ. ಇಂದು ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಸಂಸದ ಪ್ರತಾಪ್ ಸಿಂಹ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಗೆ ಆಗಮಿಸುವ ಮುಂಚಿತವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಕರ್ನಾಟಕದ ಅಭಿವೃದ್ಧಿಗೆ ಮೋದಿ ಸರಕಾರ ಬಹಳಷ್ಟು ಯೋಜನೆ ಕೊಟ್ಟಿದೆ. ಇದನ್ನೆಲ್ಲಾ ನೋಡಿದ್ರೆ ಕರ್ನಾಟಕದ ಬಗ್ಗೆ ಅವರು ಎಷ್ಟು ಕಾಳಜಿ ಹೊಂದಿದ್ದಾರೆಂದು ಗೊತ್ತಾಗುತ್ತೆ, ಇದನ್ನು ಅವರು ಯಾರ ಬಳಿಯೂ ಪ್ರೂವ್ ಮಾಡೋ ಅಗತ್ಯವಿಲ್ಲ ಎಂದು ಮಡಿಕೇರಿಯಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು.