ಮಡಿಕೇರಿ, ಜೂ.28:ಜಿಲ್ಲೆಯಲ್ಲಿ ವಿದ್ಯುತ್ ಸಂಪರ್ಕ ಪಡೆಯದೇ ಇರುವ ಕುಟುಂಬಗಳಿಗೆ ಸೌಭಾಗ್ಯ ಯೋಜನೆಯಡಿ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೆಸ್ಕ್ ಎಂಜಿನಿಯರ್‍ಗೆ ಸಂಸದ ಪ್ರತಾಪ್ ಸಿಂಹ ಸೂಚನೆ ನೀಡಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕುಗ್ರಾಮಗಳಲ್ಲಿ ಇಂದಿಗೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಪ್ರತಿ ಕುಟುಂಬಕ್ಕೂ ವಿದ್ಯುತ್ ಸಂಪರ್ಕ ಕಲ್ಪಿಸುವದರ ಜೊತೆಗೆ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ಹಲವು ಕುಗ್ರಾಮಗಳಲ್ಲಿ ಒಂದು ವಾರವಾದರೂ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಿನಲ್ಲಿ ದಿನ ದೂಡುತ್ತಿದ್ದಾರೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಯಾವ ತೊಂದರೆ ಎಂದು ಪ್ರಶ್ನಿಸಿದರು. ಸರ್ಕಾರ ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ಅನುಮತಿ ನೀಡಿದೆ. ಇದು ಕಾರ್ಯರೂಪಕ್ಕೆ ಬರಬೇಕು. ಕೊಡಗು ಜಿಲ್ಲೆಯ ವಿದ್ಯುತ್ ಸಂಪರ್ಕಕ್ಕೆ 20 ಕೋಟಿ ರೂ. ನೀಡಿದೆ. ಆದರೆ ಪ್ರಗತಿ ಸಾಧಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರ ಎಲ್‍ಇಡಿ ಬಲ್ಬ್, ಟ್ಯೂಬ್ ಲೈಟ್, ಜೊತೆಗೆ ಈಗ ಫ್ಯಾನ್ ಸಹ ಕೊಡಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸಲಹೆ ಮಾಡಿದರು.

(ಮೊದಲ ಪುಟದಿಂದ) ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ ಸೂರ್ಲಬ್ಬಿ, ಹಮ್ಮಿಯಾಲ, ಮುಟ್ಲು ಮತ್ತಿತರ ಕಡೆಗಳಲ್ಲಿ ಒಂದು ವಾರದಿಂದ ವಿದ್ಯುತ್ ಇಲ್ಲದೆ ಕತ್ತಲೆಯಲ್ಲಿ ದಿನ ದೂಡುತ್ತಿದ್ದಾರೆ. ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು. ಏಪ್ರಿಲ್, ಮೇ ತಿಂಗಳ ಲ್ಲಿಯೇ ಕಾಡನ್ನು ಕಡಿಯಬೇಕು. ಮಳೆಗಾಲದ ಅವಧಿಯಲ್ಲಿ ನಿರಂತರ ವಿದ್ಯುತ್ ಸಂಪರ್ಕಕ್ಕೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಮಾದಾಪುರದಲ್ಲಿ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು 2 ಎಕರೆ ಜಾಗ ಗುರುತಿಸಲಾಗಿದೆ. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. 2 ಎಕರೆ ಜಾಗವನ್ನು ಪಡೆದು ವಿದ್ಯುತ್ ಕೇಂದ್ರ ಸ್ಥಾಪಿಸುವಂತೆ ಸೆಸ್ಕ್ ಇಇಗೆ ಸೂಚನೆ ನೀಡಿದರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ ಸೌಭಾಗ್ಯ ಯೋಜನೆಯಡಿ ವಿದ್ಯುತ್ ಸಂಪರ್ಕವಿಲ್ಲದ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಿದೆ. ಜೊತೆಗೆ ಸೌಭಾಗ್ಯ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಕೊನೆಯ ದಿನಾಂಕವಿಲ್ಲ. ಆದರೂ ಕೊನೆಯ ದಿನಾಂಕವನ್ನು ನಿಗದಿಪಡಿಸಿ ಅರ್ಜಿ ಸ್ವೀಕರಿಸುತ್ತಿಲ್ಲ ಎಂದು ಹೇಳಿದರು.

ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಸೋಮಶೇಖರ್ ಅವರು ಜಿಲ್ಲೆಯಲ್ಲಿ 4,355 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅರ್ಜಿಗಳು ಬಂದಿದ್ದು, ಅನುಮತಿ ದೊರೆತ ನಂತರ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವದು ಎಂದು ಮಾಹಿತಿ ನೀಡಿದರು. ಸೌಭಾಗ್ಯ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯಲು ಅವಕಾಶವಿದ್ದು, ಈ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯಲು ಕೊನೆಯ ದಿನಾಂಕ ನಿಗದಿಪಡಿಸಿಲ್ಲ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 17 ಮಂದಿ ಕಿರಿಯ ಎಂಜಿನಿಯರ್‍ಗಳ ಹುದ್ದೆ ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಬೇಕಿದೆ. ಈಗಾಗಲೇ ಸೋಮವಾರಪೇಟೆ, ಮಾದಾಪುರ, ಕೂಡಿಗೆ, ಮೂರ್ನಾಡು, ಸಿದ್ದಾಪುರ, ಶ್ರೀಮಂಗಲ, ಬಾಳೆಲೆಯಲ್ಲಿ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ಸರ್ಕಾರದಿಂದ ಅನುಮತಿ ದೊರೆತಿದೆ ಎಂದು ಮಾಹಿತಿ ನೀಡಿದರು. ಸೆಸ್ಕ್‍ನ ಜೂನಿಯರ್ ಎಂಜಿನಿಯರ್ ಗಳು ತಮ್ಮ ವ್ಯಾಪ್ತಿಯಲ್ಲಿ ಸುತ್ತಾಡಬೇಕು. ಇದರಿಂದ ವಿದ್ಯುತ್ ಸಮಸ್ಯೆ ತಿಳಿಯಲಿದೆ. ಮಾದಾಪುರ ದಲ್ಲಿ ವಿದ್ಯುತ್ ಉಪ ಕೇಂದ್ರವನ್ನು ತುರ್ತಾಗಿ ಆರಂಭಿಸುವಂತೆ ಶಾಸಕರು ಸೂಚನೆ ನೀಡಿದರು.

ಸಮಿತಿ ಸದಸ್ಯರಾದ ಮನು ಮುತ್ತಪ್ಪ ಅವರು ನಾಪೋಕ್ಲು ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳಲ್ಲಿ 10 ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು, ಇದನ್ನು ಸರಿಪಡಿಸುವ ಕಾರ್ಯವಾಗಬೇಕು ಎಂದು ಹೇಳಿದರು. ಮತ್ತೊಬ್ಬ ಸಮಿತಿ ಸದಸ್ಯೆ ತೆಕ್ಕಡೆ ಶೋಭ ಮೋಹನ್ ಅವರು ವಿದ್ಯುತ್ ಅವಘಡ ಸಂಬಂಧಿಸಿದಂತೆ ಸಾರ್ವಜನಿಕರು ಸೆಸ್ಕ್ ಇಲಾಖೆಯ ಗಮನಕ್ಕೆ ತಂದಿದ್ದವರ ಮೇಲೆಯೇ ದೂರು ದಾಖಲಿಸುತ್ತಾರೆ. ದೂರನ್ನು ಹಿಂಪಡೆಯಬೇಕು ಎಂದು ನೀಡಿದರು. ಸೌಭಾಗ್ಯ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯಲು ಅವಕಾಶವಿದ್ದು, ಈ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯಲು ಕೊನೆಯ ದಿನಾಂಕ ನಿಗದಿಪಡಿಸಿಲ್ಲ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 17 ಮಂದಿ ಕಿರಿಯ ಎಂಜಿನಿಯರ್‍ಗಳ ಹುದ್ದೆ ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಬೇಕಿದೆ. ಈಗಾಗಲೇ ಸೋಮವಾರಪೇಟೆ, ಮಾದಾಪುರ, ಕೂಡಿಗೆ, ಮೂರ್ನಾಡು, ಸಿದ್ದಾಪುರ, ಶ್ರೀಮಂಗಲ, ಬಾಳೆಲೆಯಲ್ಲಿ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ಸರ್ಕಾರದಿಂದ ಅನುಮತಿ ದೊರೆತಿದೆ ಎಂದು ಮಾಹಿತಿ ನೀಡಿದರು. ಸೆಸ್ಕ್‍ನ ಜೂನಿಯರ್ ಎಂಜಿನಿಯರ್ ಗಳು ತಮ್ಮ ವ್ಯಾಪ್ತಿಯಲ್ಲಿ ಸುತ್ತಾಡಬೇಕು. ಇದರಿಂದ ವಿದ್ಯುತ್ ಸಮಸ್ಯೆ ತಿಳಿಯಲಿದೆ. ಮಾದಾಪುರ ದಲ್ಲಿ ವಿದ್ಯುತ್ ಉಪ ಕೇಂದ್ರವನ್ನು ತುರ್ತಾಗಿ ಆರಂಭಿಸುವಂತೆ ಶಾಸಕರು ಸೂಚನೆ ನೀಡಿದರು.

ಸಮಿತಿ ಸದಸ್ಯರಾದ ಮನು ಮುತ್ತಪ್ಪ ಅವರು ನಾಪೋಕ್ಲು ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳಲ್ಲಿ 10 ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು, ಇದನ್ನು ಸರಿಪಡಿಸುವ ಕಾರ್ಯವಾಗಬೇಕು ಎಂದು ಹೇಳಿದರು. ಮತ್ತೊಬ್ಬ ಸಮಿತಿ ಸದಸ್ಯೆ ತೆಕ್ಕಡೆ ಶೋಭ ಮೋಹನ್ ಅವರು ವಿದ್ಯುತ್ ಅವಘಡ ಸಂಬಂಧಿಸಿದಂತೆ ಸಾರ್ವಜನಿಕರು ಸೆಸ್ಕ್ ಇಲಾಖೆಯ ಗಮನಕ್ಕೆ ತಂದಿದ್ದವರ ಮೇಲೆಯೇ ದೂರು ದಾಖಲಿಸುತ್ತಾರೆ. ದೂರನ್ನು ಹಿಂಪಡೆಯಬೇಕು ಎಂದು ಅತೃಪ್ತಿ ವ್ಯಕ್ತಪಡಿಸಿದರು. ನಗರ ಪಟ್ಟಣ ಪ್ರದೇಶದ ಸುತ್ತಲಿನ ವ್ಯಾಪ್ತಿಯಲ್ಲಿಯೇ ಬಿ.ಎಸ್.ಎನ್.ಎಲ್ ಸಂಪರ್ಕ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಇನ್ನೂ ಕುಗ್ರಾಮಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕ ಕಲ್ಪಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಈ ಸಂಬಂಧ ಮಾಹಿತಿ ನೀಡಿದ ಭಾರತ ಸಂಚಾರ ನಿಗಮದ ಪ್ರಬಂಧಕರಾದ ಸುಬ್ಬಯ್ಯ ಅವರು ಜಿಲ್ಲೆಯ ಮಾದಾಪುರ, ಅಂಕನಹಳ್ಳಿ, ಏಳನೇ ಹೊಸಕೋಟೆ, ಗೋಣಿಕೊಪ್ಪ, ಅತ್ತೂರು, ಕೊಳಕೇರಿ ಹೀಗೆ ಹತ್ತು ಕಡೆಗಳಲ್ಲಿ ಟವರ್ ನಿರ್ಮಾಣ ಮಾಡಲು ಸಿದ್ಧತೆ ನಡೆದಿದೆ ಎಂದು ಮಾಹಿತಿ ನೀಡಿದರು. ಈಗಾಗಲೇ ಜಿಲ್ಲೆಯ 71 ಕಡೆ ಟವರ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮತಿ ಪಡೆದ ನಂತರ ಟವರ್ ಅಳವಡಿಸಲಾಗು ವದು ಎಂದು ಮಾಹಿತಿ ನೀಡಿದರು.

ಸದಸ್ಯ ಸುಭಾಷ್ ಸೋಮಯ್ಯ ಅವರು ಗಾಳಿಬೀಡು, ಹಮ್ಮಿಯಾಲ, ಮುಟ್ಲು, ಸೂರ್ಲಬ್ಬಿ ಮತ್ತಿತರ ಕಡೆಗಳಿಗೆ ದೂರವಾಣಿ ಸಂಪರ್ಕ ಕಲ್ಪಿಸಲು ಬಿ.ಎಸ್.ಎನ್.ಎಲ್ ಟವರ್ ನಿರ್ಮಿಸುವಂತೆ ಇದುವರೆಗೆ ಕೇಳಿಕೊಂಡರೂ ಸಹ ಕಾರ್ಯ ರೂಪಕ್ಕೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿ.ಪಂ.ಸಿಇಓ ಪ್ರಶಾಂತ್ ಕುಮಾರ್ ಮಿಶ್ರ, ಸಮಿತಿ ಸದಸ್ಯರು, ನಾನಾ ಇಲಾಖೆ ಅಧಿಕಾರಿಗಳು ಇತರರು ಇದ್ದರು.