ಸೋಮವಾರಪೇಟೆ,ಜು.3: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಲೂರು ಸಿದ್ದಾಪುರದಲ್ಲಿ ನಡೆಸಲು ನಿರ್ಧರಿಸಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಚರ್ಚಿಸಲು ತಾ.4 ರಂದು (ಇಂದು) ಬೆ. 10.30ಕ್ಕೆ ಆಲೂರು ಸಿದ್ದಾಪುರ ಗ್ರಾ.ಪಂ. ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.

ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ವಿವಿಧ ಇಲಾಖಾಧಿಕಾರಿಗಳು, ಜನಪ್ರತಿನಿಧಿ ಗಳು ಭಾಗವಹಿಸಲಿದ್ದಾರೆ ಎಂದು ಕಸಾಪ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ತಿಳಿಸಿದ್ದಾರೆ.