ಕುಶಾಲನಗರ, ಜು. 3: ಇಲ್ಲಿಗೆ ಸಮೀಪದ ಗೊಂದಿಬಸವನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಣೆ ಮಾಡಲಾಯಿತು.

ಉದ್ಯಮಿ ಉಮಾಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡೆಗಳನ್ನು ವಿತರಿಸಲಾಯಿತು. ಈ ಸಂದರ್ಭ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಡಿ.ಸಿ. ಹರೀಶ್, ಅರುಣ ಚಂದ್ರ, ಡಿ.ವಿ. ರಾಜೇಶ್, ಮಾಜಿ ಸದಸ್ಯ ಎಂ.ಎಸ್. ರಾಜೇಶ್, ಎಂ.ವಿ. ಹರೀಶ್, ಶಾಲಾ ಮುಖ್ಯ ಶಿಕ್ಷಕಿ ಜಲಜಾಕ್ಷಿ ಮತ್ತಿತರರು ಇದ್ದರು.