ಕೂಡಿಗೆ, ಜು. 3: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಅನುಸೂಯ ವಹಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂಡಿಗೆ ವಲಯದ ಮೇಲ್ವಿಚಾರಕ ರವಿಪ್ರಸಾದ್ ವಿದ್ಯಾರ್ಥಿಗಳಿಗೆ ಸಸಿಗಳ ಪೆÇೀಷಣೆ ಬಗ್ಗೆ ತಿಳಿಸಿದರು.

ಹೆಬ್ಬಾಲೆ ವಲಯಾರಣ್ಯಾಧಿಕಾರಿ ಸತೀಶ್, ಮೇಜರ್ ತಿಮ್ಮಯ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸೇವಾ ಸಮಿತಿಯ ಅಧ್ಯಕ್ಷೆ ಸುನೀತ, ಉಪಾಧ್ಯಕ್ಷೆ ಪ್ರಮೀಳ, ಶಾಲಾ ಮುಖ್ಯ ಶಿಕ್ಷಕಿ ವಾಣಿ ಸೇರಿದಂತೆ ಸಹಶಿಕ್ಷಕ ವೃಂದ, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.