ಕುಶಾಲನಗರ, ಜು. 9: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕುಶಾಲನಗರ ವಲಯ ಮಟ್ಟದ ಕಾರ್ಯಕ್ಷೇತ್ರದ ಸದಸ್ಯರಿಗೆ ಪರಿಸರ ಜಾಗೃತಿ ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಸಮೀಪದ ನಂಜರಾಯಪಟ್ಟಣ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆದ ಕಾರ್ಯಗಾರವನ್ನು ಸ್ಥಳೀಯ ಗ್ರಾಪಂ ಸದಸ್ಯ ಸುಮೇಶ್ ಉದ್ಘಾಟಿಸಿದರು.

ವಲಯ ಮೇಲ್ವಿಚಾರಕ ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಪ್ರಗತಿ ಬಂಧು ಸ್ವಸಹಾಯ ಸಂಘದ ಪದಾಧಿಕಾರಿಗಳು, ಸದಸ್ಯರು ಇದ್ದರು.