ಅಜಾಗರೂಕತೆ ಹಾಗೂ ಅತೀ ವೇಗದ ಚಾಲನೆಯಿಂದ ವಾಹನವೊಂದು ತೋಟದೊಳಗೆ ಮಗುಚಿಕೊಂಡ ಘಟನೆ ಸಮೀಪದ ಬಾಳೆಕಾಡು ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ನಡೆದಿದೆ.

ಕುಶಾಲನಗರದಿಂದ ಮಡಿಕೇರಿಯತ್ತ ತೆರಳುತ್ತಿದ್ದ ನಾಲ್ವರು ಪ್ರವಾಸಿಗರಿದ್ದ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲಭಾಗದ ತೋಟದೊಳಗೆ ಮಗುಚಿಕೊಂಡಿದೆ. ಪರಿಣಾಮ ಸಣ್ಣಪುಟ್ಟ ಗಾಯಗಳಿಂದ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಂಟಿಕೊಪ್ಪದ ಗ್ಯಾಸ್ ಏಜೆನ್ಸಿಯ ಸಮೀಪದಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಈ ಕಾರು ತಾಗಿಸಿಕೊಂಡು ಹೋಗಿದ್ದು, ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.