ಸೋಮವಾರಪೇಟೆ, ಜು. 13: ಜಿಲ್ಲಾ ಪೊಲೀಸ್ ಇಲಾಖೆ, ಸೋಮವಾರಪೇಟೆ ಪೊಲೀಸ್ ಠಾಣೆ ವತಿಯಿಂದ ಇಲ್ಲಿನ ಓಎಲ್‍ವಿ ಶಾಲಾ ಆವರಣದಲ್ಲಿ ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಶಾಲಾ ವಾಹನ ಚಾಲಕರುಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ ಮಾತನಾಡಿ, ವಾಹನಗಳಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಕರೆತರುವ ಚಾಲಕರುಗಳು ರಸ್ತೆ ಸುರಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಕ್ಕಳ ಚಲನವಲನಗಳ ಬಗ್ಗೆ ನಿಗಾ ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಪೊಲೀಸ್ ಠಾಣಾಧಿಕಾರಿ ಎಂ. ಶಿವಣ್ಣ, ಸಿಸ್ಟರ್ ಮಮತ, ಸೆರೇನ್, ಶಿಕ್ಷಕರಾದ ದಿನೇಶ್, ಪಿ.ಸಿ. ಜಗದೀಶ್ ಅವರುಗಳು ಉಪಸ್ಥಿತರಿದ್ದರು.