ಮಡಿಕೇರಿ, ಜು. 13: ಅರಣ್ಯ ಇಲಾಖೆ, ಕುಶಾಲನಗರ ವಲಯ ವತಿಯಿಂದ ನೆಲ್ಲಿಹುದಿಕೇರಿ ಭಾಗದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಬಳಂಜಿಕೆರೆ, ಬೆಟ್ಟದಕಾಡು ಮಾರ್ಗವಾಗಿ ಕಾಡಿಗೆ ಓಡಿಸುವ ಕಾರ್ಯಾಚರಣೆ ತಾ. 14ರಂದು (ಇಂದು) ಬೆಳಿಗ್ಗೆ 8.30ರಿಂದ ಪ್ರಾರಂಭವಾಗಲಿದೆ. ಈ ಭಾಗದ ಸಾರ್ವಜನಿಕರು, ತೋಟದ ಮಾಲೀಕರು ಹಾಗೂ ಕೂಲಿ ಕಾರ್ಮಿಕರು ಅರಣ್ಯ ಇಲಾಖೆಗೆ ಸಹಕರಿಸಬೇಕೆಂದು ಪ್ರಕಟಣೆ ಕೋರಿದೆ.