ಕುಶಾಲನಗರ, ಜು. 14: ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ಆಡಳಿತ ಮಂಡಳಿ ವತಿಯಿಂದ ತುಂಬಿ ಹರಿಯುತ್ತಿರುವ ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಾಯಿತು.

ಕೂಡಿಗೆಯಲ್ಲಿ ಕಾವೇರಿ ಮತ್ತು ಹಾರಂಗಿ ಸಂಗಮವಾಗಿ ಕಣಿವೆ ಮೂಲಕ ಹರಿಯುತ್ತಿರುವ ನದಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದ ದೇವಾಲಯದ ಅರ್ಚಕರಾದ ರಾಘವೇಂದ್ರ ಆಚಾರ್ ಪೂಜಾ ವಿಧಿವಿಧಾನಗಳು ನೆರವೇರಿಸಿದರು.

ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎನ್.ಸುರೇಶ್, ಉಪಾಧ್ಯಕ್ಷ ಮಂಜುನಾಥಸ್ವಾಮಿ, ನಿರ್ದೇಶಕರಾದ ಕೆ.ಎಸ್.ಮಾಧವ, ಇ.ಎಸ್.ಗಣೇಶ್, ಮಧು, ಮಹೇಶ್, ನಾಗೇಂದ್ರ, ನರಸಿಂಹಶೆಟ್ಟಿ, ಕೃಷ್ಣಮೂರ್ತಿ, ಹೆಬ್ಬಾಲೆ ಗ್ರಾ.ಪಂ. ಸದಸ್ಯ ವೆಂಕಟೇಶ್, ಸ್ಥಳೀಯರಾದ ಸುಕನ್ಯ, ಕೆ.ಎಸ್.ಮಹೇಶ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್.ಚಂದ್ರಮೋಹನ್ ಮತ್ತಿತರರು ಇದ್ದರು.