ಮಡಿಕೇರಿ, ಜು. 14: ಮಡಿಕೇರಿ ತಾಲೂಕು ಬಿಜೆಪಿ ವತಿಯಿಂದ ತಾ.16ರಂದು ಪೂರ್ವಾಹ್ನ 11 ಗಂಟೆಗೆ ಭಾರತೀಯ ಜನತಾ ಪಾರ್ಟಿಯ ಮಡಿಕೇರಿ, ತಹಶೀಲ್ದಾರ್ ಕಚೇರಿ ಮುಂದೆ, ಕಂದಾಯ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಮಡಿಕೇರಿ ತಾಲೂಕು ಅಧ್ಯಕ್ಷ ತಳೂರು ಎ. ಕಿಶೋರ್ ಕುಮಾರ್ ತಿಳಿಸಿದ್ದಾರೆ.