ವೀರಾಜಪೇಟೆ, ಜು. 16: ವೀರಾಜಪೇಟೆಯ ಕೊಡಗು ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಸಹಯೋಗದೊಂದಿಗೆ ತಾ.26ರಂದು ಕಾರ್ಗಿಲ್ ಯುದ್ಧದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಹಾಗೂ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುವದು.

ಅಂದು ಬೆಳಿಗ್ಗೆ 10.30ಗಂಟೆಗೆ ಇಲ್ಲಿನ ಸ್ಟೇಟ್ ಬ್ಯಾಂಕ್ ಬಳಿಯಿರುವ ಯೋಧರ ಸ್ಮಾರಕದ ಸ್ತಂಭದ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನಂಜಪ್ಪ ತಿಳಿಸಿದ್ದಾರೆ.