ಕೂಡಿಗೆ, ಜು. 19: ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿರಂಗಾಲ ಶಾಖೆಯ ನೂತನ ಕಚೇರಿಯನ್ನು ತಾಲೂಕು ಪಂಚಾಯಿತಿ ಸದಸ್ಯ ಎನ್.ಎಸ್. ಜಯಣ್ಣ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಸಹಕಾರ ಸಂಘದ ಅಭಿವೃದ್ಧಿಗೆ ರೈತರ ಪಾತ್ರ ಮುಖ್ಯ.

ರೈತರಿಗೆ ಸಹಕಾರ ಸಂಘದ ಮೂಲಕ ಇಲಾಖೆಯ ನಿಯಮಾನುಸಾರ ಎಲ್ಲಾ ರೀತಿಯ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎಸ್. ಬಸವಣ್ಣ, ಲೋಕಪಾಲ್, ಶಿವಣ್ಣ, ಚಂದ್ರಶೇಖರ್ ಅವರನ್ನು ಸನ್ಮಾನಿಸ ಲಾಯಿತು. ಕಾರ್ಯಕ್ರಮದಲ್ಲಿ ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಎಸ್. ರಮೇಶ್, ಸಂಘದ ಅಧ್ಯಕ್ಷ ಹೆಚ್.ಟಿ. ದಿನೇಶ್, ನಿರ್ದೇಶಕರಾದ ರಮೇಶ್, ಕೆ.ಎಸ್. ಕೃಷ್ಣೇಗೌಡ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ಜೀವನ್ ಇದ್ದರು.