ಮಡಿಕೇರಿ, ಜು. 19: ಧಾರಾಕಾರ ಮಳೆಯಿಂದಾಗಿ ಕೊಡಗು ಜಿಲ್ಲೆ ಅನುಭವಿಸುತ್ತಿರುವ ಕಷ್ಟ, ನಷ್ಟಗಳನ್ನು ಮುಖ್ಯಮಂತ್ರಿಗಳ ಮನಮುಟ್ಟುವಂತೆ ಮಾಡುವ ಮೂಲಕ ಕೊಡಗಿನ ಬಗ್ಗೆ ಕಾಳೇರ ಅಬ್ದುಲ್ ಫತ್ತಾಹ್ ತೋರಿರುವ ಕಾಳಜಿ ಶ್ಲಾಘನಾರ್ಹವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಎ. ಯಾಕೂಬ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಈ ಬಾಲಕನ ಮನವಿಗೆ ಮುಖ್ಯಮಂತ್ರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದು, ಇದು ಬಾಲಕನ ಜಯ ಮಾತ್ರವಲ್ಲದೆ ಜಿಲ್ಲೆಯ ಜನರ ಜಯವೂ ಆಗಿದೆ ಎಂದು ಅಭಿಪ್ರಾಯಿಸಿದ್ದಾರೆ.