ನಾಪೆÇೀಕ್ಲು, ಜು. 19: ಮಡಿಕೇರಿಯಿಂದ ರಾತ್ರಿ 8 ಗಂಟೆಗೆ ಹೊರಟು ಬೆಟ್ಟಗೇರಿ ಮಾರ್ಗವಾಗಿ ನಾಪೆÇೀಕ್ಲು ತಲಪಿ 9 ಗಂಟೆಗೆ ಪಾರಾಣೆ, ವೀರಾಜಪೇಟೆ ಮೂಲಕ ಬೆಂಗಳೂರಿಗೆ ಸಂಚರಿಸುತ್ತಿದ್ದ ರಾಜಹಂಸ ಬಸ್ ಸಂಚಾರವನ್ನು ಸ್ಥಗಿತಗೊಳಿಸಿ ಅದರ ಬದಲಿಗೆ ಸುವರ್ಣ ಸಾರಿಗೆ ಬಸ್ಸನ್ನು ಚಾಲಿಸುತ್ತಿರುವ ಬಗ್ಗೆ ನಾಪೆÇೀಕ್ಲು ವ್ಯಾಪ್ತಿಯ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾತ್ರಿ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಈ ಬಸ್‍ನಿಂದಾಗಿ ಹೆಚ್ಚಿನ ಅನುಕೂಲವಾಗುತ್ತಿತ್ತು. ಸುವರ್ಣ ಸಾರಿಗೆಯಲ್ಲಿ ಹೆಂಗಸರು, ಮಕ್ಕಳು, ವೃದ್ಧರು ರಾತ್ರಿ ಸಮಯದಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ. ಆದ್ದರಿಂದ ಕೂಡಲೇ ಹಿಂದಿನಂತೆ ರಾಜಹಂಸ ಬಸ್ ಸಂಚಾರಕ್ಕೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ನಾಪೆÇೀಕ್ಲು ಪಟ್ಟಣದಲ್ಲಿ ಸುವರ್ಣ ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಲಾಗುವದು ಎಂದು ಪ್ರಯಾಣಿಕರ ಪರವಾಗಿ ಕಂಗಾಂಡ ಜಾಲಿ ಪೂವಪ್ಪ, ಕುಟ್ಟಂಜೆಟ್ಟಿರ ಪೂಣಚ್ಚ, ಮತ್ತಿತರರು ಆಗ್ರಹಿಸಿದರು.