ಕುಶಾಲನಗರ, ಜು. 20: ಕುಶಾಲ ನಗರ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಮತ್ತು ನಂತರದ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಹಾಸ್ಟೆಲ್‍ಗಳಿಗೆ ಜಿ.ಪಂ. ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಗತ್ಯ ಸೌಕರ್ಯಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದರು. ವಿದ್ಯಾರ್ಥಿಗಳು ಖಾಸಗಿ ಕಟ್ಟಡಗಳಲ್ಲಿ ನಿರ್ಮಾಣವಾಗಿರುವ ಹಾಸ್ಟೆಲ್‍ಗಳಲ್ಲಿ ಇರುವ ಬಗ್ಗೆ ಮಾಹಿತಿ ತಿಳಿದ ಬೋಪಣ್ಣ ಸ್ವಂತ ಕಟ್ಟಡ ಕಲ್ಪಿಸಿಕೊಡಲು ಸರಕಾರಕ್ಕೆ ಮನವಿ ಸಲ್ಲಿಸುವದಾಗಿ ತಿಳಿಸಿದರು.

ವಸತಿ ನಿಲಯದಲ್ಲಿ ಮಕ್ಕಳಿಗೆ ಕಲ್ಪಿಸಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಜಿ.ಪಂ. ಸಭೆಯಲ್ಲಿ ಚರ್ಚಿಸಿ ಸರಕಾರದಿಂದ ಅನುದಾನ ಬಿಡುಗಡೆ ಮಾಡಿಸುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭ ಹಿಂದುಳಿದ ಕಲ್ಯಾಣ ಇಲಾಖೆಯ ತಾಲೂಕು ವಿಸ್ತರಣಾ ಅಧಿಕಾರಿ ಶ್ರೀಕಾಂತ್, ವಸತಿ ನಿಲಯದ ಮೇಲ್ವಿಚಾರಕ ಮಧು, ಜಿ.ಪಂ. ಸದಸ್ಯೆ ಮಂಜುಳಾ ಇದ್ದರು.