ಪತ್ರಕರ್ತರ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟವು ಇಂದು ಬೆಳಿಗ್ಗೆ 10.30 ಗಂಟೆಗೆ ಕೊಳಕೇರಿ ಗ್ರಾಮದಲ್ಲಿರುವ ದಿ.ಬಿದ್ದಾಟಂಡ ದೇವಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಕ್ರೀಡಾಕೂಟಕ್ಕೆ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿದ್ದಾಟಂಡ ಎ. ಮುತ್ತಣ್ಣ ಚಾಲನೆ ನೀಡಲಿದ್ದಾರೆ.

ಸಂಜೆ 4.30 ಗಂಟೆಗೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಬೆಳೆಗಾರರಾದ ಅಪ್ಪಚ್ಚೀರ ಕೆ.ನಾಣಯ್ಯ, ಬಿದ್ದಾಟಂಡ ಟಿ.ಕಾರ್ಯಪ್ಪ, ಚೇಂದಂಡ ನವೀನ್, ಉದ್ಯಮಿ ಚುಪ್ಪ ನಾಗರಾಜ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕುಡೆಕಲ್ ಸಂತೋಷ್, ಪ್ರೆಸ್‍ಕ್ಲಬ್ ಪ್ರಧಾನ ಕಾರ್ಯದರ್ಶಿ ಆರ್.ಸುಬ್ರಹ್ಮಣಿ ತಿಳಿಸಿದ್ದಾರೆ.

ನೋಟ್ ಪುಸ್ತಕ ವಿತರಣೆ

ಕ್ಲಬ್ ಮಹೀಂದ್ರ ವತಿಯಿಂದ (ಇಂದು) ಬೆಳಿಗ್ಗೆ 11 ಗಂಟೆಗೆ ಸೂರ್ಲಬ್ಬಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಶಾಲಾ ಸಾಮಗ್ರಿ ವಿತರಿಸುವ ಕಾರ್ಯಕ್ರಮ ನಡೆಯಲಿದೆ.