ಶನಿವಾರಸಂತೆ, ಜು. 24 ಶನಿವಾರಸಂತೆ ನಿವೃತ್ತ ಸೈನಿಕರ ಸಂಘದ ವತಿಯಿಂದ 19ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ತಾ. 26 ರಂದು ಶನಿವಾರಸಂತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಆಚರಿಸಲಾಗುವದು.

ಬೆಳಿಗ್ಗೆ 10 ಗಂಟೆಗೆ ನಿವೃತ್ತ ಸೈನಿಕರ ಸಂಘದ ಕಚೇರಿಯಿಂದ ಮೆರವಣಿಗೆ ಸಾಗಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗು ವದು. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರು, ಕಾಲೇಜುಗಳ ವಿದ್ಯಾರ್ಥಿ ಗಳು, ಶನಿವಾರಸಂತೆ - ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಠಾಣಾಧಿಕಾರಿ, ಸಿಬ್ಬಂದಿಗಳು, ಕಂದಾಯ ಇಲಾಖೆ ಯವರು, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಸದಸ್ಯರು, ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷರು, ಸದಸ್ಯರು, ವಾಹನ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಪತ್ರಕರ್ತರು, ವರ್ತಕರ ಸಂಘ, ಫೀ.ಮಾ. ಜನರಲ್ ಕಾರ್ಯಪ್ಪ ಅಭಿಮಾನಿಗಳ ಸಂಘದವರು ಉಪಸ್ಥಿತರಿರುವರು ಎಂದು ನಿವೃತ್ತ ಸೈನಿಕರ ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.